ಇಸ್ಲಾಮಾಬಾದ್: ಸುಳ್ಳು ಸುದ್ದಿ ಆಧರಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧ ತನಿಖೆಗೆ ಆದೇಶಿಸಿದ ಬಗ್ಗೆ ಪ್ರಧಾನಿ ಶಾಹಿದ್ ಅಬ್ಬಾಸಿ ಅವರು ಬುಧವಾರ ಇಲ್ಲಿನ ಭ್ರಷ್ಟಾಚಾರ ತಡೆ ಘಟಕವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಷರೀಫ್ ಅವರು 2016ರಲ್ಲಿ ಭಾರತಕ್ಕೆ ₹32,830 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆಂದು ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಭ್ರಷ್ಟಾಚಾರ ತಡೆ ಘಟಕವು ಮಂಗಳವಾರ ತನಿಖೆಗೆ ಆದೇಶಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.