ADVERTISEMENT

ಹಿಂದೂ ದೇವಾಲಯದ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2014, 19:30 IST
Last Updated 8 ಜನವರಿ 2014, 19:30 IST

ಢಾಕಾ (ಪಿಟಿಐ): ಬಾಂಗ್ಲಾದೇಶದಲ್ಲಿ ಚುನಾವಣಾ ನಂತರದ ಹಿಂಸಾಚಾರ ಮುಂದುವರಿದಿದ್ದು, ಬುಧವಾರ ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಿ ನಾಶ ಪಡಿಸಲಾಗಿದೆ.

  ಮಧ್ಯ ಬಾಂಗ್ಲಾದ ನೇತ್ರಕೋನ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ,  ಕಾಳಿ ದೇವಾಲಯಕ್ಕೆ ಬೆಂಕಿ ಹಂಚಿದ್ದಾರೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.

ದೇಶದಲ್ಲಿ ಇತ್ತೀಚೆಗೆ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಿ­ರು­­ವವರನ್ನು ಬಂಧಿಸಲಾ­ಗುವುದು ಎಂದು ಪ್ರಧಾನಿ ಶೇಖ್‌ ಹಸೀನಾ ಅವರು ಹೇಳಿಕೆ ಕೊಟ್ಟ ಬೆನ್ನಲ್ಲೇ ಈ ಘಟನೆ ನಡೆದಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.