ADVERTISEMENT

ಶ್ರೀಲಂಕಾ ನೌಕಾಪಡೆಯಿಂದ 15 ಭಾರತೀಯ ಮೀನುಗಾರರ ಬಂಧನ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2022, 12:49 IST
Last Updated 6 ನವೆಂಬರ್ 2022, 12:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಲಂಬೊ: ತನ್ನ ದೇಶದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದಡಿ ಶ್ರೀಲಂಕಾ ನೌಕಾಪಡೆ 15 ಭಾರತೀಯ ಮೀನುಗಾರರನ್ನು ಬಂಧಿಸಿ, ಎರಡು ಟ್ರಾಲರ್ ದೋಣಿಗಳನ್ನು ವಶಪಡಿಸಿಕೊಂಡಿದೆ.

ಮನ್ನಾರ್ ದ್ವೀಪದ ವಾಯವ್ಯ ಭಾಗದ ಜನವಸತಿ ಪ್ರದೇಶವಾದ ತಲೈಮನ್ನಾರ್‌ನಲ್ಲಿ ಶನಿವಾರ ಮೀನುಗಾರರನ್ನು ಬಂಧಿಸಲಾಗಿದ್ದು, ಅವರನ್ನು ಮೀನುಗಾರಿಕಾ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ನೌಕಾಪಡೆ ಮೂಲಗಳು ತಿಳಿಸಿದೆ.

ಭಾರತ ಹಾಗೂ ಶ್ರೀಲಂಕಾ ವ್ಯಾಪ್ತಿಯಲ್ಲಿರುವ ಸಮುದ್ರದ ಗಡಿಯಲ್ಲಿ ಉಭಯದೇಶಗಳ ಮೀನುಗಾರರು ಅಕ್ರಮವಾಗಿ ಮೀನುಗಾರಿಕೆ ಮಾಡುವ ಆರೋಪ, ಪ್ರತ್ತ್ಯಾರೋಪಗಳು ಸಾಕಷ್ಟು ಬಾರಿ ಕೇಳಿ ಬಂದಿದ್ದು, 32ನೇ ಅಂತಾರಾಷ್ಟ್ರೀಯ ಮರೈನ್‌ ಗಡಿ ಕುರಿತ ಸಭೆಯಲ್ಲೂ ಚರ್ಚೆ ನಡೆದಿದೆ. ಅಲ್ಲದೇ ಈ ಕುರಿತು ಉಭಯ ದೇಶಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆಯುತ್ತಿದ್ದರೂ ಈವರೆಗೂ ಪರಿಹಾರ ಸಿಕ್ಕಿಲ್ಲ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.