ಕೊಲಂಬೊ: ಭಾನುವಾರ ಶ್ರೀಲಂಕಾದಲ್ಲಿಸಂಭವಿಸಿದ 8ಸರಣಿ ಬಾಂಬ್ ಸ್ಫೋಟದಲ್ಲಿ 270 ಮಂದಿ ಸಾವಿಗೀಡಾಗಿದ್ದಾರೆ.
ಇದು ಧಾರ್ಮಿಕ ಪ್ರತ್ಯೇಕತಾವಾದಿಗಳು ನಡೆಸಿದ ಭಯೋತ್ಪಾದಾ ಕೃತ್ಯ ಎಂದು ಶ್ರೀಲಂಕಾದ ರಕ್ಷಣಾ ಸಚಿವ ರುವಾನ್ ವಿಜೇವರ್ಧನ ಹೇಳಿದ್ದಾರೆ.
ಭಾನುವಾರ ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರುಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಲ್ಲ. ದಾಳಿ ಪ್ರಕರಣದಲ್ಲಿ ಶಂಕಿತ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಈ ರೀತಿ ಕೃತ್ಯಗಳು ದೇಶದಲ್ಲಿ ಅಸ್ಥಿರತೆ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.
ಇದನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.