ಬಿಜೀಂಗ್: ‘ಚೀನಾದ ಹುಟುಬಿ ಕೌಂಟಿಯ ಕಲ್ಲಿದ್ದಲು ಗಣಿಯ ಸುರಂಗದಲ್ಲಿ ಸಂಭವಿಸಿದ ಪ್ರವಾಹದಲ್ಲಿ 21 ಕಾರ್ಮಿಕರು ಸಿಲುಕಿದ್ದು, ಭಾನುವಾರವೂ ಅವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
‘ಕ್ಸಿನ್ಜಿಯಾಂಗ್ ಪ್ರದೇಶದ ಹುಟುಬಿ ಕೌಂಟಿಯ ಕಲ್ಲಿದ್ದಲು ಗಣಿಯಲ್ಲಿ ಶನಿವಾರ ಸಂಜೆ 6.10ಕ್ಕೆ ಪ್ರವಾಹ ಸಂಭವಿಸಿದೆ. ಈಗಾಗಲೇ ಅಲ್ಲಿಂದ 8 ಮಂದಿಯನ್ನು ರಕ್ಷಿಸಲಾಗಿದೆ’ ಎಂದು ವರದಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.