ADVERTISEMENT

26/11ರ ಮುಂಬೈ ದಾಳಿ ಪ್ರಕರಣ: ಗಡೀಪಾರು ಪ್ರಶ್ನಿಸಿ ರಾಣಾ ಅರ್ಜಿ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 11:18 IST
Last Updated 2 ಜೂನ್ 2023, 11:18 IST
ತಹಾವುರ್‌ ರಾಣಾ
ತಹಾವುರ್‌ ರಾಣಾ    (ಪಿಟಿಐ ಚಿತ್ರ)

ವಾಷಿಂಗ್ಟನ್‌: 2008ರಲ್ಲಿ ನಡೆದ ಮುಂಬೈ ದಾಳಿ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹಾವುರ್‌ ರಾಣಾ ತಮ್ಮನ್ನು ಭಾರತಕ್ಕೆ ಗಡೀಪಾರು ಮಾಡಲು ಆದೇಶಿಸಿರುವುದನ್ನು ಪ್ರಶ್ನಿಸಿ  ಅರ್ಜಿ ಸಲ್ಲಿಸಿದ್ದಾರೆ.

ಅಮೆರಿಕದ ನ್ಯಾಯಾಲಯವೊಂದು ಕಳೆದ ತಿಂಗಳು ರಾಣಾ ಅವರನ್ನು ಭಾರತಕ್ಕೆ ಗಡೀಪಾರು ಮಾಡಲು ಒಪ್ಪಿಗೆ ನೀಡಿತ್ತು. ಇದನ್ನು ಪ್ರಶ್ನಿಸಿ ತಮ್ಮ ವಕೀಲರ ಮೂಲಕ ರಾಣಾ ಅರ್ಜಿ ಸಲ್ಲಿಸಿದ್ದಾರೆ. ರಾಣಾ ಗಡೀಪಾರು ಮಾಡಿದರೆ ‌ಅಮೆರಿಕ–ಭಾರತ ನಡುವಿನ ಒಪ್ಪಂದವನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ವಕೀಲರು ವಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT