ADVERTISEMENT

ಗುರುದ್ವಾರ ದಾಳಿ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಸಿಖ್ ಯುವಕನ ಹತ್ಯೆ

ಏಜೆನ್ಸೀಸ್
Published 5 ಜನವರಿ 2020, 11:09 IST
Last Updated 5 ಜನವರಿ 2020, 11:09 IST
ಹತ್ಯೆಯಾದ ಸಿಖ್ ಯುವಕ ರವೀಂದರ್ ಸಿಂಗ್‌ –ಎಎನ್‌ಐ ಚಿತ್ರ
ಹತ್ಯೆಯಾದ ಸಿಖ್ ಯುವಕ ರವೀಂದರ್ ಸಿಂಗ್‌ –ಎಎನ್‌ಐ ಚಿತ್ರ   

ಇಸ್ಲಾಮಾಬಾದ್‌:ನನಕಾನಾ ಸಾಹಿಬ್‌ ಗುರುದ್ವಾರದ ಮೇಲೆ ನಡೆದ ದಾಳಿಗೆ ತೀವ್ರ ವಿರೋಧ ವ್ಯಕ್ತವಾಗಿರುವ ಸಂದರ್ಭದಲ್ಲೇ ಪಾಕಿಸ್ತಾನದ ಪೇಶಾವರದಲ್ಲಿ ಸಿಖ್ ಯುವಕನನ್ನು ಹತ್ಯೆ ಮಾಡಲಾಗಿದೆ.

ರವೀಂದರ್ ಸಿಂಗ್‌ (25) ಎಂಬುವವರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಚಮ್‌ಕನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಭಾನುವಾರ) ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿಎಎನ್‌ಐಸುದ್ದಿಸಂಸ್ಥೆ ವರದಿ ಮಾಡಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಸಿಖ್‌ ಧರ್ಮ ಸ್ಥಾಪಕ ಗುರುನಾನಕ್ ದೇವ್‌ ಅವರ ಜನ್ಮಸ್ಥಳ ‘ನನಕಾನಾ ಸಾಹಿಬ್‌’ಗುರುದ್ವಾರದ ಮೇಲೆಗುಂಪೊಂದು ಶುಕ್ರವಾರ ಕಲ್ಲುತೂರಾಟ ನಡೆಸಿತ್ತು. ಬಳಿಕ ಆ ಪ್ರದೇಶದಲ್ಲಿಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ದಾಳಿಯಿಂದ ಗುರುದ್ವಾರಕ್ಕೆ ಹಾನಿಯಾಗಿದೆ ಎಂಬ ಆರೋವೂ ವ್ಯಕ್ತವಾಗಿತ್ತು.ದಾಳಿಯನ್ನು ಭಾರತದ ಹಲವು ರಾಜಕೀಯ ಪಕ್ಷಗಳು ಮತ್ತು ಸಿಖ್‌ ಸಂಘಟನೆಗಳು ಖಂಡಿಸಿದ್ದವು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರ್ಕಾವನ್ನು ಭಾರತ ಆಗ್ರಹಿಸಿತ್ತು. ಆದರೆ, ಆರೋಪಗಳನ್ನು ತಳ್ಳಿಹಾಕಿದ್ದ ಪಾಕಿಸ್ತಾನ ಸರ್ಕಾರ, ‘ಸಿಖ್‌ ಧರ್ಮಸ್ಥಾಪಕ ಗುರುನಾನಕ್‌ ಅವರ ಜನ್ಮಸ್ಥಳದ ಸ್ಮಾರಕ ಸುರಕ್ಷಿತವಾಗಿದೆ. ಯಾವುದೇ ಧಕ್ಕೆಯಾಗಿಲ್ಲ’ ಎಂದು ಸ್ಪಷ್ಟನೆ ನೀಡಿತ್ತು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.