ವಾಷಿಂಗ್ಟನ್: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆದ್ವಿಪಕ್ಷೀಯ ಮಾತುಕತೆ ಅಗತ್ಯವಿದ್ದರೆ, ಅದು ಭಾರತ ಮತ್ತು ಪಾಕಿಸ್ತಾನದ ನಡುವೆಯಷ್ಟೇ ಇರಲಿದೆ ಎಂದು ಭಾರತ ಸ್ಪಷ್ಟಪಡಿಸಿದೆ.
‘ಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದುಭಾರತ ಹಾಗೂ ಪಾಕಿಸ್ತಾನ ಸರ್ಕಾರ ಇಚ್ಛಿಸಿದಲ್ಲಿ ನಾನು ಸಿದ್ಧನಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿಕೆ ನೀಡಿದ್ದರು. ಇದರಬೆನ್ನಲ್ಲೇ ವಿದೇಶಾಂಗ ಸಚಿವ ಜೈಶಂಕರ್ಅಮೆರಿಕದ ಮಧ್ಯಸ್ಥಿಕೆ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ.
ಬ್ಯಾಂಕಾಕ್ನಲ್ಲಿ ನಡೆ ಯುತ್ತಿರುವ9ನೇ ಪೂರ್ವ ಏಷ್ಯಾ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ, ಅಮೆರಿಕ ವಿದೇಶಾಂಗ ಸಚಿವ ಮೈಕ್ ಪಾಂಪಿಯೊ ಅವರನ್ನು ಭೇಟಿಯಾಗಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯುವುದಿದ್ದರೆ ಅದು ಭಾರತ ಮತ್ತು ಪಾಕಿಸ್ತಾನದ ನಡುವೆಯಷ್ಟೇ ನಡೆಯಲಿದೆ ಎನ್ನುವುದನ್ನು ಸ್ಪಷ್ಟವಾಗಿಪಾಂಪಿಯೊ ಅವರಿಗೆತಿಳಿಸಿದ್ದೇನೆ’ ಎಂದು ಶುಕ್ರವಾರಟ್ವೀಟ್ ಮೂಲಕ ಜೈಶಂಕರ್ ತಿಳಿಸಿದ್ದಾರೆ.
ಮಧ್ಯಸ್ಥಿಕೆಗೆ ಆಗ್ರಹಿಸಿದ್ದ ಮೋದಿ: ಜುಲೈ 22ರಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭೇಟಿ ನಂತರ ಶ್ವೇತ ಭವನದಲ್ಲಿಜಂಟಿ ಸುದ್ದಿಗೋಷ್ಠಿ ನಡೆಸಿದ್ದ ಟ್ರಂಪ್, ‘ ಜಪಾನ್ನಲ್ಲಿ ಜೂನ್ನಲ್ಲಿಜಿ–20 ಶೃಂಗಸಭೆ ನಡೆದ ಸಂದರ್ಭದಲ್ಲಿಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಕೇಳಿ ಕೊಂಡಿದ್ದರು’ ಎಂದು ಹೇಳಿಕೆ ನೀಡಿ ದ್ದರು. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೊಳಗಾಗಿತ್ತು. ಆದರೆ ಭಾರತ ಈ ಹೇಳಿಕೆಯನ್ನು ನಿರಾಕರಿಸಿ, ಮೋದಿ ಮತ್ತು ಟ್ರಂಪ್ ನಡುವೆ ಕಾಶ್ಮೀರದ ವಿಷಯವೇ ಚರ್ಚೆಯಾಗಿರಲಿಲ್ಲ ಎಂದಿತ್ತು. ಸಂಸತ್ತಿನಲ್ಲಿ ಈ ಕುರಿತು ಜೈಶಂಕರ್ ಸ್ಪಷ್ಟನೆಯನ್ನೂ ನೀಡಿದ್ದರು.
‘ಪಾಕಿಸ್ತಾನದ ಜತೆ ಮಾತುಕತೆ ನಡೆಸಬೇಕೆಂದರೆ ಮೊದಲು ಗಡಿಯಲ್ಲಿನ ಭಯೋತ್ಪಾದನಾ ಚಟುವಟಿಕೆಗಳನ್ನು ಅಂತ್ಯಗೊಳಿಸಬೇಕು’ ಎಂದು ಉಲ್ಲೇಖಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.