ADVERTISEMENT

ಸಂಘರ್ಷ ಬಿಟ್ಟು, ಮಾತುಕತೆಯಿಂದ ಸಮಸ್ಯೆ ಪರಿಹರಿಸಿಕೊಳ್ಳುವುದು ಅವಶ್ಯ: ಗುಟೆರಸ್

ಪಿಟಿಐ
Published 29 ಜನವರಿ 2021, 8:30 IST
Last Updated 29 ಜನವರಿ 2021, 8:30 IST
ಆಂಟೊನಿಯೊ ಗುಟೆರಸ್
ಆಂಟೊನಿಯೊ ಗುಟೆರಸ್   

ವಿಶ್ವಸಂಸ್ಥೆ: ‘ಯಾವುದೇ ದೇಶಗಳ ಸೇನೆಗಳು ಪರಸ್ಪರ ಸಂಘರ್ಷಕ್ಕಿಳಿಯುವುದು ವಿಪತ್ತಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನಗಳು ತಮ್ಮ ನಡುವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗಂಭೀರವಾಗಿ ಚರ್ಚಿಸುವುದು ಅವಶ್ಯಕವಾಗಿದೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಶ್ಮೀರದಲ್ಲಿ ಈಗಿರುವ ಪರಿಸ್ಥಿತಿಯನ್ನು ಉಲ್ಲೇಖಿಸಿ ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಸ್ಥಿತಿ ಕುರಿತು ಪಾಕಿಸ್ತಾನದ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗುಟೆರಸ್ ಈ ರೀತಿ ಪ್ರತಿಕ್ರಿಯಿಸಿದರು.

‘ನೀವು ಪ್ರಸ್ತಾಪಿಸಿದ ಎಲ್ಲಾ ಪ್ರಾಂತ್ಯಗಳಲ್ಲಿ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಗೌರವಿಸುವುದು ಅತ್ಯಗತ್ಯ’ ಎಂದು ಹೇಳಿದರು.

ADVERTISEMENT

‘ಸೇನೆ ಬಳಸದೇ ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕೆಂಬುದು ನಮ್ಮ ಒತ್ತಾಯವಾಗಿದೆ. ಪಾಕಿಸ್ತಾನ ಮತ್ತು ಭಾರತದ ನಡುವಿನ ವಿಚಾರವನ್ನು ಗಮನಿಸಿದರೆ, ಸೇನೆಗಳ ಬಳಕೆಯಿಂದ ಅಪಾಯ ಸಂಭವಿಸುವುದು ಸ್ಪಷ್ಟವಾಗಿದೆ. ಇದರಿಂದ ಆ ಎರಡು ದೇಶಕ್ಕಲ್ಲದೇ, ವಿಶ್ವಕ್ಕೇ ತೊಂದರೆಯಾಗಲಿದೆ‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.