ADVERTISEMENT

ಮ್ಯಾನ್ಮಾರ್‌ ಪ್ರತಿಭಟನೆ: ಬಿಬಿಸಿ ಪತ್ರಕರ್ತ ಬಿಡುಗಡೆ

ಏಜೆನ್ಸೀಸ್
Published 22 ಮಾರ್ಚ್ 2021, 11:28 IST
Last Updated 22 ಮಾರ್ಚ್ 2021, 11:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಯಾಂಗೂನ್: ‘ಮ್ಯಾನ್ಮಾರ್‌ನಲ್ಲಿ ಬಂಧಿಸಿದ್ದ ಬಿಬಿಸಿ ಪ‍ತ್ರಕರ್ತನನ್ನು ಸೋಮವಾರ ಬಿಡುಗಡೆಗೊಳಿಸಲಾಗಿದೆ’ ಎಂದು ಸುದ್ದಿ ಸಂಸ್ಥೆಯೊಂದು ಹೇಳಿದೆ.

ನೈಪಿತಾವ್‌ನ ನ್ಯಾಯಾಲಯದ ಮುಂದೆ ಪ್ರತಿಭಟನೆ ಕುರಿತಂತೆ ವರದಿ ಮಾಡುತ್ತಿದ್ದ ಬಿಬಿಸಿ ಪತ್ರಕರ್ತ ಆಂಗ್ ಥುರಾ ಅವರನ್ನು ಬಿಳಿ ಬಣ್ಣದ ವಸ್ತ್ರ ಧರಿಸಿದ್ದ ವ್ಯಕ್ತಿಗಳು ಶುಕ್ರವಾರ ಬಂಧಿಸಿದ್ದರು.

‘ಸದ್ಯ ಆಂಗ್‌ ಥುರಾ ಅವರನ್ನು ಬಿಡುಗಡೆಗೊಳಿಸಲಾಗಿದೆ. ಆದರೆ, ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.

ADVERTISEMENT

ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ಪ್ರತಿಭಟನೆ ಮುಂದುವರಿದಿದ್ದು, ಸೋಮವಾರ ಶಿಕ್ಷಕರು ಸೇರಿದಂತೆ ಹಲವಾರು ಮಂದಿ ಮಾಂಡೆಲಾ ನಗರದಲ್ಲಿ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನಕಾರರು,‘ಮಿಲಿಟರಿ ಹಿಂಸಾಚಾರವನ್ನು ತಡೆಯಲು ವಿಶ್ವಸಂಸ್ಥೆ ಮಧ್ಯಪ್ರವೇಶಿಸಬೇಕು’ ಎಂದು ಘೋಷಣೆಗಳನ್ನು ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.