ADVERTISEMENT

ಶ್ರೀಲಂಕಾ: ಪ್ರಪಾತಕ್ಕೆ ಬಿದ್ದ ಬಸ್‌, 14 ಮಂದಿ ಸಾವು

ಏಜೆನ್ಸೀಸ್
Published 20 ಮಾರ್ಚ್ 2021, 20:14 IST
Last Updated 20 ಮಾರ್ಚ್ 2021, 20:14 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೊಲಂಬೊ: ಶ್ರೀಲಂಕಾದಲ್ಲಿ ಬಸ್‌ವೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 30 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.

‘ಮಧ್ಯ ಶ್ರೀಲಂಕಾದ ಪಸ್ಸಾರಾ ಪಟ್ಟಣ ಬಳಿಯ ಪ್ರಪಾತಕ್ಕೆ ಬಸ್‌ ಉರುಳಿ ಬಿದ್ದಿದೆ’ ಎಂದು ಪೊಲೀಸರು ತಿಳಿಸಿದರು.

‘ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ ಚಾಲಕ ಬದುಕುಳಿದಿದ್ದಾನೆಯೇ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ’ ಎಂದು ಪೊಲೀಸರ ವಕ್ತಾರ ಅಜಿತ್‌ ರೋಹಾನಾ ಮಾಹಿತಿ ನೀಡಿದರು.

ADVERTISEMENT

‘ಈ ಬಸ್ಸಿನಲ್ಲಿ 70 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು’ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.