ಬೀಜಿಂಗ್: ಆಕಸ್ಮಿಕವಾಗಿ ಭಾರತದ ಕ್ಷಿಪಣಿ ಪಾಕಿಸ್ತಾನದ ನೆಲಕ್ಕೆ ಅಪ್ಪಳಿಸಿದ ಘಟನೆಗೆ ಸಂಬಂಧಿಸಿದಂತೆ ಉಭಯ ದೇಶಗಳು ಶೀಘ್ರವೇ ಮಾತುಕತೆ ನಡೆಸಬೇಕು ಎಂದು ಚೀನಾ ಒತ್ತಾಯಿಸಿದೆ. ಅಲ್ಲದೆ ಈ ಘಟನೆ ಸಂಬಂಧ ವಸ್ತುನಿಷ್ಠ ತನಿಖೆ ನಡೆಯಬೇಕು ಎಂದು ಅದು ಹೇಳಿದೆ.
ಈ ಬಗ್ಗೆ ಸೋಮವಾರ ಮಾತನಾಡಿದ ಚೀನಾದ ವಿದೇಶಾಂಗ ಇಲಾಖೆ ವಕ್ತಾರ ಝಾವೊ ಲಿಜಿಯಾನ್, ದಕ್ಷಿಣ ಏಷ್ಯಾದಲ್ಲಿ ಪಾಕಿಸ್ತಾನ ಮತ್ತು ಭಾರತ ಮುಖ್ಯವಾದ ದೇಶಗಳಾಗಿವೆ. ಪ್ರಾಂತೀಯ ಭದ್ರತೆ ಮತ್ತು ಸ್ಥಿರತೆಯನ್ನು ಎತ್ತಿಹಿಡಿಯುವ ಜವಾಬ್ದಾರಿಯನ್ನು ಹೊಂದಿವೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.