ಟೋಕಿಯೊ:ವಿದೇಶಾಂಗ ಸಚಿವ ಎಸ್. ಜೈಶಂಕರ್, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಜಪಾನಿನ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಶುಕ್ರವಾರ ಭೇಟಿ ಮಾಡಿ, ಪ್ರಾದೇಶಿಕ ಶಾಂತಿ, ಸ್ಥಿರತೆ ಕಾಪಾಡಿಕೊಳ್ಳಲು ಎರಡೂ ದೇಶಗಳ ನೀತಿ ಮತ್ತು ಹಿತಾಸಕ್ತಿಗಳ ಸಮನ್ವಯದ ಮಹತ್ವದ ಕುರಿತು ಚರ್ಚೆ ನಡೆಸಿದರು.
‘ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಭೇಟಿ ಮಾಡಿ ಸಂತೋಷವಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಿಶಿದಾ ಅವರು ಆಲೋಚನೆಗಳು ಶೀಘ್ರದಲ್ಲಿಯೇ ಜಾರಿಗೆ ಬರಲಿದೆ’ ಎಂದು ಸಚಿವ ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.