ADVERTISEMENT

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಏಜೆನ್ಸೀಸ್
Published 1 ಏಪ್ರಿಲ್ 2022, 20:13 IST
Last Updated 1 ಏಪ್ರಿಲ್ 2022, 20:13 IST
ಸರ್ಕಾರದ ವಿರುದ್ಧ ಪ್ರತಿಭಟನೆ
ಸರ್ಕಾರದ ವಿರುದ್ಧ ಪ್ರತಿಭಟನೆ    

ಕೊಲಂಬೊ: ತೀವ್ರ ಸ್ವರೂಪದ ಆರ್ಥಿಕ ಮುಗ್ಗಟ್ಟಿನಿಂದ ಪ್ರಕ್ಷುಬ್ಧಗೊಂಡಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈ ಕುರಿತು ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಶುಕ್ರವಾರ ಘೋಷಿಸಿದರು.

ನೂರಾರು ಜನರು ರಾಜಪಕ್ಸ ಅವರ ನಿವಾಸವನ್ನು ಮುತ್ತಿಗೆ ಹಾಕಲು ಪ್ರಯತ್ನಿಸಿದ ಮರುದಿನವೇ ಈ ನಿರ್ಧಾರ ಕೈಗೊಳ್ಳಲಾಗಿದೆ. ‘ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಇದೆ ಎಂಬುದು ನನ್ನ ನಂಬಿಕೆ. ಅದರಿಂದಾಗಿ ಕಠಿಣ ಕಾನೂನುಗಳನ್ನು ಜಾರಿ ಮಾಡ
ಬೇಕಾಯಿತು. ಶಂಕಿತರನ್ನು ಬಂಧಿಸಲು, ವಶಕ್ಕೆ ತೆಗೆದುಕೊಳ್ಳಲು ಭದ್ರತಾ ಪಡೆಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ’ ಎಂದು ರಾಜಪಕ್ಸ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT