ADVERTISEMENT

ಹೇಳಿಕೆ ದಾಖಲು ಸಮಯ ಕೋರಿದ ಉಗ್ರ ಹಫೀಜ್‌

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 20:04 IST
Last Updated 13 ಜನವರಿ 2020, 20:04 IST

ಲಾಹೋರ್‌: ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ತನ್ನ ಹೇಳಿಕೆ ದಾಖಲಿಸಲು, ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಹಫೀಜ್‌ ಸಯೀದ್‌ ಸಮಯ ಕೇಳಿದ್ದಾನೆ.

ಉಗ್ರನ ಪರವಾಗಿ ಆತನ ವಕೀಲ ಭಯೋತ್ಪಾದಕ ನಿಗ್ರಹ ಕೋರ್ಟ್‌ನಲ್ಲಿ ಅಹವಾಲು ಸಲ್ಲಿಸಿದರು. ಇದಕ್ಕೆ ಸಮ್ಮತಿ ನೀಡಿದ ನ್ಯಾಯಾಲಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತು.

ಕಳೆದ ವಿಚಾರಣೆಯಲ್ಲಿ ಸಯೀದ್‌ಗೆ ಕೋರ್ಟ್‌ ಆತನ ವಿರುದ್ಧದ ಆರೋಪಗಳಿಗೆ ಅನ್ವಯಿಸಿ ಪ್ರಶ್ನಾವಳಿಯನ್ನು ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.