ಕರಾಚಿ (ಪಿಟಿಐ):ಪಾಕಿಸ್ತಾನದಲ್ಲಿ ಧಾರ್ಮಿಕ ಪುಸ್ತಕದ ಪುಟಗಳನ್ನು ಸುಟ್ಟು ಧರ್ಮನಿಂದನೆ ಮಾಡಿದ ಆರೋಪದ ಮೇಲೆ ಹಿಂದೂ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಅಶೋಕ್ ಕುಮಾರ್ ಬಂಧಿತ ವ್ಯಕ್ತಿ. ಈತ ನೈರ್ಮಲ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ತೆಹ್ರಿಕ್ ಇ ಲಬ್ಬಾಯಿಕ್ ಪಾಕಿಸ್ತಾನ್ (ಟಿಎಲ್ಪಿ) ಉಗ್ರ ಸಂಘಟನೆ ಹಿಂದೂ ಕುಟುಂಬಗಳ ಮನೆಗಳ ಎದುರು ಸರಣಿ ಪ್ರತಿಭಟನೆ ನಡೆಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.