ಬುಧವಾರ ಮುಂಜಾನೆ ವಿಶೇಷ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ಮಜರ್–ಇ–ಷರೀಫ್ ನಗರದಲ್ಲಿರುವ ಭಾರತೀಯ ದೂತಾವಾಸ ಕಚೇರಿಯ ರಾಜತಾಂತ್ರಿಕ ಸಿಬ್ಬಂದಿ ಮತ್ತು ಭಾರತೀಯ ನಾಗರಿಕರನ್ನು ರಕ್ಷಿಸಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ವಿಶೇಷ ವಿಮಾನವು ಮಂಗಳವಾರ ತಡರಾತ್ರಿಯೇ ಹೊರಡಬೇಕಾಗಿತ್ತು. ಆದರೆ, ಭದ್ರತೆಯ ಕಾರಣಕ್ಕಾಗಿ ಕೆಲ ತಾಸುಗಳ ವಿಳಂಬದ ನಂತರ ಪ್ರಯಾಣ ಬೆಳೆಸಿತು. ಈ ನಿಟ್ಟಿನಲ್ಲಿ ಭಾರತವು ಅಫ್ಗನ್ ಸರ್ಕಾರದೊಂದಿಗೆ ನಿರಂತರ ಸಂಪರ್ಕ ಸಾಧಿಸಿತ್ತು.
ಈ ನಡುವೆ ಮಜರ್–ಇ–ಷರೀಫ್ ನಗರದಲ್ಲಿರುವ ಭಾರತೀಯ ದೂತಾವಾಸ ಕಚೇರಿಯನ್ನು ಮುಚ್ಚುವುದಿಲ್ಲ ಎಂದು ಭಾರತ ಸರ್ಕಾರವು ಸ್ಪಷ್ಟಪಡಿಸಿದ್ದು, ಸ್ಥಳೀಯ ಉದ್ಯೋಗಿಗಳೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದೆ.
ಭಾರತ ಮಾತ್ರವಲ್ಲ, ವಿಶ್ವಸಂಸ್ಥೆಯು ತನ್ನ ಅಧಿಕಾರಿಗಳನ್ನು ಮಜರ್-ಇ-ಷರೀಫ್ನಿಂದ ಸ್ಥಳಾಂತರಿಸಲು ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.