ಕೊಲಂಬೊ: ‘ಪ್ರಜಾಸತ್ತಾತ್ಮಕವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಭಾರತ ಎದುರು ನೋಡುತ್ತಿದೆ. ದ್ವೀಪ ರಾಷ್ಟ್ರದ ಜನರಿಗೆ ನವದೆಹಲಿಯ ಕಾಳಜಿ ಮತ್ತು ಬದ್ಧತೆ ಮುಂದುವರಿಯುತ್ತದೆ’ ಎಂದು ಭಾರತೀಯ ಹೈಕಮಿಷನ್ ಗುರುವಾರ ತಿಳಿಸಿದೆ.
ರನಿಲ್ ವಿಕ್ರಮಸಿಂಘೆ ಅವರು ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಮೊದಲ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ಭಾರತೀಯ ಹೈಕಮಿಷನ್, ‘ಭಾರತವು ಶ್ರೀಲಂಕಾದಲ್ಲಿ ರಾಜಕೀಯ ಸ್ಥಿರತೆಯನ್ನು ಬಯಸುತ್ತದೆ’ ಎಂದು ಹೇಳಿದೆ.
ಇವನ್ನೂ ಓದಿ
*ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ
*ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ಇಂದು ರಾಜೀನಾಮೆ ಸಾಧ್ಯತೆ
*ಶ್ರೀಲಂಕಾ| ರಾಜೀನಾಮೆ ಬಳಿಕ ಈಗ ಮಹಿಂದಾ ರಾಜಪಕ್ಸ ಬಂಧನಕ್ಕೆ ಆಗ್ರಹ
*ಲಂಕಾ ದಹನ: ಶ್ರೀಲಂಕಾ ಮಾಜಿ ಪ್ರಧಾನಿ ರಾಜಪಕ್ಸ ಭಾರತಕ್ಕೆ ಪಲಾಯನ ಮಾಡಿದರೇ?
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.