ADVERTISEMENT

ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ 44,000 ಮೆಟ್ರಿಕ್ ಟನ್ ಯೂರಿಯಾ ಪೂರೈಸಿದ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜುಲೈ 2022, 11:07 IST
Last Updated 10 ಜುಲೈ 2022, 11:07 IST
   

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಭಾರತವು ಭಾನುವಾರ 44,000 ಮೆಟ್ರಿಕ್ ಟನ್ ಯೂರಿಯಾ ಪೂರೈಸಿದೆ.

ಹಣ ಪಾವತಿಸುವ ಬಗ್ಗೆ ಬ್ಯಾಂಕ್‌ ಖಾತರಿ (ಕ್ರೆಡಿಟ್‌ ಲೈನ್) ಆಧಾರದಲ್ಲಿ ಶ್ರೀಲಂಕಾಕ್ಕೆ ಭಾರತ ಈ ನೆರವು ನೀಡಿದೆ. ಶ್ರೀಲಂಕಾ ರೈತರಿಗೆ ಬೆಂಬಲವಾಗಿ ನಿಲ್ಲುವ ಗುರಿಯನ್ನು ಭಾರತ ಹೊಂದಿರುವುದಾಗಿ ಶ್ರೀಲಂಕಾದ ಭಾರತೀಯ ಹೈಕಮಿಷನರ್ ಹೇಳಿದ್ದಾರೆ.

ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಭಾರತ ಈಗಾಗಲೇ ಹಲವು ಬಾರಿ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸಿ ಸಹಾಯಹಸ್ತ ಚಾಚಿದೆ.

ADVERTISEMENT

ಹಣದುಬ್ಬರದಿಂದಾಗಿ ಸುಮಾರು 60 ಲಕ್ಷ ಶ್ರೀಲಂಕನ್ನರು ಆಹಾರದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವಿಶ್ವ ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.