ADVERTISEMENT

ಕೆನಡಾ: ಭಾರತದ ಹೈಕಮಿಷನರ್‌ ಕಾರ್ಯಕ್ರಮ ರದ್ದು

ಪಿಟಿಐ
Published 21 ಮಾರ್ಚ್ 2023, 13:24 IST
Last Updated 21 ಮಾರ್ಚ್ 2023, 13:24 IST
   

ಟೊರಾಂಟೊ: ಖಾಲಿಸ್ತಾನ ಬೆಂಬಲಿಗರು ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಭಾರತೀಯ ರಾಯಭಾರಿ ಭಾಗವಹಿಸಬೇಕಿದ್ದ ಕಾರ್ಯಕ್ರಮವನ್ನು ಭದ್ರತಾ ಕಾರಣದಿಂದ ರದ್ದುಗೊಳಿಸಲಾಗಿದೆ.

ಕಾರ್ಯಕ್ರಮವನ್ನು ಭಾನುವಾರ ತಾಜ್‌ ಪಾರ್ಕ್‌ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಭಾರತದ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಅವರು ಭೇಟಿ ನೀಡಬೇಕಿತ್ತು. ಇದು ಪಶ್ಚಿಮ ಕರಾವಳಿಗೆ ಅವರ ಮೊದಲ ಭೇಟಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT