ADVERTISEMENT

ಸುಡಾನ್‌ ಸಂಘರ್ಷದಲ್ಲಿ ಗುಂಡೇಟು ತಗುಲಿ ಭಾರತ ಮೂಲದ ವ್ಯಕ್ತಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಏಪ್ರಿಲ್ 2023, 6:51 IST
Last Updated 16 ಏಪ್ರಿಲ್ 2023, 6:51 IST
   

ಖಾರ್ಟೂಮ್(ಸುಡಾನ್): ಸುಡಾನ್‌ನ ಸೇನೆ ಮತ್ತು ಅರೆಸೇನಾಪಡೆ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಭಾರತೀಯ ವ್ಯಕ್ತಿಯೊಬ್ಬರು ಗುಂಡೇಟಿನಿಂದ ಮೃತಪಟ್ಟಿದ್ದಾರೆ.

ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಈ ಸುದ್ದಿಯನ್ನು ದೃಢಪಡಿಸಿದ್ದು, ಮೃತ ವ್ಯಕ್ತಿಯನ್ನು ಆಲ್ಬರ್ಟ್ ಆಗಸ್ಟಿನ್ ಎಂದು ಗುರುತಿಸಲಾಗಿದೆ.

‘ದಾಲ್ ಗ್ರೂಪ್‌’ ಎಂಬ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಗೆಸ್ಟಿನ್ ಅವರಿಗೆ ಶನಿವಾರ ಗುಂಡೇಟು ಬಿದ್ದಿತ್ತು. ಅವರು ಮೃತಪಟ್ಟಿದ್ದಾರೆ ಎಂದು ರಾಯಭಾರ ಕಚೇರಿ ಭಾನುವಾರ ಸ್ಪಷ್ಟಪಡಿಸಿದೆ.

ADVERTISEMENT

ಮುಂದಿನ ವಿಧಿ ವಿಧಾನಗಳನ್ನು ನೆರವೇರಿಸಲು ಮೃತರ ಕುಟುಂಬ ಮತ್ತು ವೈದ್ಯಕೀಯ ಪ್ರಾಧಿಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ರಾಯಭಾರ ಕಚೇರಿಯು ಟ್ವೀಟ್‌ ಮಾಡಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.