ADVERTISEMENT

ಕೆನಡಾ: ಮಗನಿಂದಲೇ ಭಾರತ ಮೂಲದ ವ್ಯಕ್ತಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2024, 14:04 IST
Last Updated 12 ಫೆಬ್ರುವರಿ 2024, 14:04 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಟೊರಾಂಟೊ: ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಭಾರತ ಮೂಲದ 56 ವರ್ಷದ ವ್ಯಕ್ತಿಯನ್ನು ಮಗನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಕುಲ್‌ದೀಪ್‌ ಸಿಂಗ್‌ ಎಂಬವವರನ್ನು ಅವರ ಮಗ ಸುಖ್‌ರಾಜ್‌ ಸಿಂಗ್‌ ಚೀಮಾ (22) ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ADVERTISEMENT

ಕುಲ್‌ದೀಪ್‌ ಅವರು ತೀವ್ರವಾಗಿ ಗಾಯಗೊಂಡಿರುವ ಸ್ಥಿತಿಯಲ್ಲಿ ಶನಿವಾರ ಮನೆಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟರು ಎಂದು ವಿವರಿಸಿದರು.

ಕುಲ್‌ದೀಪ್‌ ಅವರ ಮಗ ಮನೆಯಿಂದ ಓಡಿ ಹೋಗಿದ್ದನ್ನು ನೋಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.