ಮನಿಲಾ: ಫಿಲಿಪ್ಪೀನ್ಸ್ ದೇಶದಲ್ಲಿ ಭಾರತದ ಕಬಡ್ಡಿ ಕೋಚ್ ಒಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಕೋಚ್ ಪಂಜಾಬ್ ರಾಜ್ಯದ ಮೊಗಾದ ಗುರುಪ್ರೀತ್ ಸಿಂಗ್ ಗಿಂಡ್ರು (43) ಎಂದು ಗುರುತಿಸಲಾಗಿದೆ. ಗುರುಪ್ರೀತ್ ಸಿಂಗ್ ಅವರು 2019ರಲ್ಲಿ ಉದ್ಯೋಗ ನಿಮಿತ್ತ ಫಿಲಿಪ್ಪೀನ್ಸ್ಗೆ ತೆರಳಿದ್ದರು. ಅಲ್ಲಿ ಅವರು ಕಬಡ್ಡಿ ಕೋಚ್ ಆಗಿದ್ದರು.
ಮಂಗಳವಾರ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುಪ್ರೀತ್ ಹತ್ಯೆ ಮಾಡಿದವರ ಗುರುತು ಪತ್ತೆಯಾಗಿಲ್ಲ. ಅವರ ಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.