ADVERTISEMENT

ಜಮ್ಮು ಮತ್ತು ಕಾಶ್ಮೀರ: ಗಡಿ ನುಸುಳಲು ಯತ್ನಿಸಿದ ಮೂವರು ಉಗ್ರರ ಹತ್ಯೆ

ಪಿಟಿಐ
Published 25 ಆಗಸ್ಟ್ 2022, 11:34 IST
Last Updated 25 ಆಗಸ್ಟ್ 2022, 11:34 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ಅಕ್ರಮ ನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಮೂವರನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದ ಕಮಲಕೋಟ್‌ ಪ್ರದೇಶದಲ್ಲಿರುವ ಮದಿಯಾನ್ ನಾಯಕ್ ಪೋಸ್ಟ್‌ ಸಮೀಪ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, 'ಸೇನೆ ಮತ್ತು ಬಾರಾಮುಲ್ಲಾ ಪೊಲೀಸರು ಉರಿ ವಲಯದ ಮದಿಯಾನ್ ನಾಯಕ್‌ ಪೋಸ್ಟ್‌ ಸಮೀಪ ಮೂವರು ನುಸುಳುಕೋರ ಉಗ್ರರನ್ನು ಹೊಡೆದುರುಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ' ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.