ADVERTISEMENT

ಕೋವಿಡ್‌–19ನಿಂದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಾವು?

ಏಜೆನ್ಸೀಸ್
Published 6 ಜೂನ್ 2020, 8:44 IST
Last Updated 6 ಜೂನ್ 2020, 8:44 IST
ದಾವೂದ್ ಇಬ್ರಾಹಿಂ
ದಾವೂದ್ ಇಬ್ರಾಹಿಂ   

ಬೆಂಗಳೂರು: ಕೊರೊನಾ ವೈರಸ್‌ ಸೋಂಕಿನಿಂದ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಾವಿಗೀಡಾಗಿರುವುದಾಗಿ ಮಾಧ್ಯಮವೊಂದು ಟ್ವಿಟರ್‌ನಲ್ಲಿ ಪ್ರಕಟಿಸಿಕೊಂಡಿದೆ. ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಂಗ್ಯದ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ದಾವೂದ್‌ ಇಬ್ರಾಹಿಂ ಮತ್ತು ಆತನ ಪತ್ನಿ ಮೆಹಜಬೀನ್‌ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಅವರನ್ನು ಕರಾಚಿಯಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು.

ದಾವೂದ್‌ನ ವೈಯಕ್ತಿಕ ಹಾಗೂ ಭದ್ರತಾ ಸಿಬ್ಬಂದಿಯನ್ನು ಕ್ವಾರೆಂಟೈನ್‌ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.

ADVERTISEMENT

1993ರಲ್ಲಿ ನಡೆದ ಮುಂಬೈ ಸರಣಿ ಬಾಂಬ್‌ ಸ್ಫೋಟದ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಪಾತಕಿಗಳಲ್ಲಿ ಒಬ್ಬನೆಂದು ದಾವೂದ್‌ ಇಬ್ರಾಹಿಂನನ್ನು ಪರಿಗಣಿಸಲಾಗಿದೆ. ದಾವೂದ್‌ ಕರಾಚಿಯಲ್ಲಿ ವಾಸಿಸುತ್ತಾನೆಂದು ಹೇಳಲಾಗುತ್ತದೆಯಾದರೂ ಪಾಕಿಸ್ತಾನ ಸರ್ಕಾರ ಇದನ್ನು ಅಲ್ಲಗಳೆಯುತ್ತಲೇ ಬಂದಿದೆ.

ಈವರೆಗೂ ಪಾಕಿಸ್ತಾನದಲ್ಲಿ 93,983 ಕೋವಿಡ್‌-19 ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಸೋಂಕಿನಿಂದ ಸತ್ತವರ ಸಂಖ್ಯೆ 1,935 ತಲುಪಿದೆ. 32,581 ಜನ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.