ADVERTISEMENT

ಅಫ್ಗಾನಿಸ್ತಾನ ಬಿಕ್ಕಟ್ಟು: ಗುಟೆರಸ್‌ – ಜೈಶಂಕರ್‌ ಚರ್ಚೆ

ಪಿಟಿಐ
Published 18 ಆಗಸ್ಟ್ 2021, 6:36 IST
Last Updated 18 ಆಗಸ್ಟ್ 2021, 6:36 IST
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಅವರನ್ನು ಭೇಟಿಯಾದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್‌                    –ಟ್ವಿಟರ್‌ ಚಿತ್ರ
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಅವರನ್ನು ಭೇಟಿಯಾದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್‌                    –ಟ್ವಿಟರ್‌ ಚಿತ್ರ   

ವಿಶ್ವಸಂಸ್ಥೆ: ಅಫ್ಗಾನಿಸ್ತಾನವು ತಾಲಿಬಾನ್‌ ಉಗ್ರರ ಕೈವಾಶವಾಗಿದ್ದು, ಅಲ್ಲಿನ ಪರಿಸ್ಥಿತಿ ಬಗ್ಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಅವರೊಂದಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚರ್ಚೆ ನಡೆಸಿದರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಫ್ಗನ್‌ ಪರಿಸ್ಥಿತಿ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆದಿರುವ ಹಿನ್ನೆಲೆಯಲ್ಲಿ ಜೈಶಂಕರ್‌ ಅವರು ಸೋಮವಾರ ನ್ಯೂಯಾರ್ಕ್‌ಗೆ ತೆರಳಿದ್ದರು. ಭಾರತದ ಅಧ್ಯಕ್ಷತೆಯಲ್ಲಿ ಭದ್ರತಾ ಮಂಡಳಿಯು 10 ದಿನಗಳಲ್ಲಿ ಎರಡನೇ ಬಾರಿ ಸಭೆ ಸೇರಿತ್ತು.

ಈ ಬಗ್ಗೆ ಟ್ವೀಟ್‌ ಮಾಡಿರುವ ಜೈಶಂಕರ್‌, ‘ಗುಟೆರಸ್‌ ಅವರನ್ನು ಭೇಟಿಯಾದೆ. ಭದ್ರತಾ ಮಂಡಳಿ ಸಭೆ ಬಳಿಕ ಅಫ್ಗಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಅವರೊಂದಿಗೆ ಚರ್ಚಿಸಿದೆ’ ಎಂದು ಹೇಳಿದ್ದಾರೆ.

ADVERTISEMENT

ಜೈ ಶಂಕರ್‌ ಅವರು ಎಸ್ಟೋನಿಯಾದ ವಿದೇಶಾಂಗ ವ್ಯವಹಾರಗಳ ಸಚಿವೆ ಇವಾ-ಮರಿಯಾ ಲೈಮೆಟ್ಸ್ ಅವರನ್ನೂ ಭೇಟಿಯಾದರು.

‘ಸಮುದ್ರ, ಸೈಬರ್‌ ಭದ್ರತೆ ಮತ್ತು ಇತರ ಜಾಗತಿಕ ಸಮಸ್ಯೆಗಳನ್ನು ಎದುರಿಸಲು ಉಭಯ ರಾಷ್ಟ್ರಗಳು ಜೊತೆಯಾಗಿ ಕೆಲಸ ಮಾಡುವುದರ ಕುರಿತು ಇವಾ ಅವರೊಂದಿಗೆ ಚರ್ಚಿಸಿದೆ. ಅಫ್ಗಾನಿಸ್ತಾನದ ಪರಿಸ್ಥಿತಿ ಬಗ್ಗೆ ಉಭಯ ರಾಷ್ಟ್ರಗಳ ದೃಷ್ಟಿಕೋನವನ್ನೂ ನಾವು ಹಂಚಿಕೊಂಡೆವು’ ಎಂದು ಜೈಶಂಕರ್‌ ಹೇಳಿದ್ದಾರೆ.

ಜೈಶಂಕರ್ ಆಗಸ್ಟ್‌ 19ರಂದು ಭಯೋತ್ಪಾದನೆ ನಿಗ್ರಹದ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.