ADVERTISEMENT

ದ್ವಿಪಕ್ಷೀಯ ಬಾಂಧವ್ಯ: ಜೈಶಂಕರ್, ಇಥಿಯೋಪಿಯಾ ಅಧ್ಯಕ್ಷ ಚರ್ಚೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 12:12 IST
Last Updated 22 ಜೂನ್ 2022, 12:12 IST
ಜೈಶಂಕರ್
ಜೈಶಂಕರ್   

ಅಡಿಸ್ ಅಬಾಬಾ: ‌ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಬುಧವಾರ ಇಥಿಯೋಪಿಯಾ ಅಧ್ಯಕ್ಷ ಸಹ್ಲೆ-ವರ್ಕ್ ಝೆವ್ಡೆ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ಸಹಕಾರದ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, ’ದ್ವಿಪಕ್ಷೀಯ ಸಹಕಾರ ಸೇರಿದಂತೆ ಶಿಕ್ಷಣ, ಆರೋಗ್ಯ, ಬಂಡವಾಳ ಕುರಿತು ಉತ್ತಮ ಚರ್ಚೆ ನಡೆಯಿತು ‘ ಎಂದು ಹೇಳಿದ್ದಾರೆ.ಇದೇ ವೇಳೆ ಭಾರತೀಯ ಸಮುದಾಯ ಉದ್ದೇಶಿಸಿ ಅವರು ಮಾತನಾಡಿದರು.

ಇಲ್ಲಿನ ಭಾರತೀಯ ರಾಯಭಾರಿ ಕಚೇರಿ ವೆಬ್‌ಸೈಟ್ ಪ್ರಕಾರ, ಇಥಿಯೋಪಿಯಾದಲ್ಲಿ ಭಾರತೀಯ ವಲಸೆಗಾರರು 6 ಸಾವಿರದಿಂದ 7 ಸಾವಿರ ಜನರು ಇರಬಹುದು ಎಂದು ಅಂದಾಜಿಸಲಾಗಿದೆ. ಪೂರ್ವ ಆಫ್ರಿಕಾ ದೇಶದಲ್ಲಿ ಹಲವಾರು ಭಾರತೀಯ ಕಂಪನಿಗಳಿವೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.