ನ್ಯೂಯಾರ್ಕ್: ಕೋವಿಡ್ ಕ್ವಾರಂಟೈನ್ ವಿಷಯಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಪರಿಹಾರ ಒದಗಿಸುವಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬ್ರಿಟನ್ನ ವಿದೇಶಾಂಗ ಕಾರ್ಯದರ್ಶಿ ಎಲಿಜಬೆತ್ ಟ್ರಸ್ಸ್ ಅವರನ್ನು ಒತ್ತಾಯಿಸಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಉನ್ನತ ಮಟ್ಟದ ಅಧಿವೇಶನದಲ್ಲಿ ಭಾಗವಹಿಸಲು ಜೈಶಂಕರ್ ಅವರು ಸೋಮವಾರ ಇಲ್ಲಿಗೆ ಬಂದಿದ್ದಾರೆ.
ಎಲಿಜಬೆತ್ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಜೈಶಂಕರ್ ಅವರು ಅಫ್ಗಾನಿಸ್ತಾನದ ಪರಿಸ್ಥಿತಿ ಮತ್ತು ಭಾರತ–ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳ ಕುರಿತೂ ಚರ್ಚಿಸಿದ್ದಾರೆ.
ಈ ಇಬ್ಬರು ಪರಸ್ಪರ ಭೇಟಿಯಾದ ದಿನದಂದೇ ಬ್ರಿಟನ್ ಕೋವಿಡ್ಗೆ ಸಂಬಂಧಿಸಿದಂತೆ ಹೊಸದಾಗಿ ಪ್ರಯಾಣ ನಿರ್ಬಂಧಗಳನ್ನು ವಿಧಿಸಿದೆ. ಈ ನಿರ್ಬಂಧದ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.
ಹೊಸ ನಿಯಮದ ಪ್ರಕಾರ ಭಾರತದ ಪ್ರಯಾಣಿಕರು ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದಿದ್ದರೂ ಅವರು ಲಸಿಕೆ ಪಡೆದಿಲ್ಲ ಎಂದೇ ಪರಿಗಣಿಸಲಾಗುವುದು ಮತ್ತು 10 ದಿನಗಳವರೆಗೆ ಅವರು ಪ್ರತ್ಯೇಕವಾಗಿ ವಾಸಿಸಬೇಕಿದೆ.
ಜೈಶಂಕರ್ ಅವರು, ನಾರ್ವೆ ಮತ್ತು ಇರಾಕ್ನ ತಮ್ಮ ಸಹವರ್ತಿಗಳೊಂದಿಗೂ ಮಾತುಕತೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.