ADVERTISEMENT

ಕಠ್ಮಂಡುವಿಗೆ ಸಚಿವ ಜೈಶಂಕರ್‌

ಪಿಟಿಐ
Published 19 ಆಗಸ್ಟ್ 2019, 20:15 IST
Last Updated 19 ಆಗಸ್ಟ್ 2019, 20:15 IST
ಎಸ್‌. ಜೈಶಂಕರ್‌
ಎಸ್‌. ಜೈಶಂಕರ್‌   

ಕಠ್ಮಂಡು: ನೇಪಾಳ– ಭಾರತ ಜಂಟಿ ಆಯೋಗದ ಐದನೇ ಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರು ನೇಪಾಳಕ್ಕೆ ತೆರಳಲಿದ್ದಾರೆ.

ಸಭೆಯು ಆಗಸ್ಟ್‌ 21 ಹಾಗೂ 22ರಂದು ಕಠ್ಮಂಡುವಿನಲ್ಲಿ ನಡೆಯಲಿದೆ ಎಂದು ನೇಪಾಳದ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ.

ಸಭೆಯಲ್ಲಿ ಎರಡೂ ದೇಶದ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಯಲಿದೆ. ರಸ್ತೆ ಸಂಪರ್ಕ ಹಾಗೂ ಆರ್ಥಿಕ ಸಹಭಾಗಿತ್ವ, ವ್ಯಾಪಾರ, ಸಂಸ್ಕೃತಿ, ಶಿಕ್ಷಣ ಸೇರಿದಂತೆ ಹಲವು ವಿಷಯಗಳ ಚರ್ಚೆ ನಡೆಯಲಿದೆ ಎಂದು ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.