ಕಠ್ಮಂಡು: ನೇಪಾಳ– ಭಾರತ ಜಂಟಿ ಆಯೋಗದ ಐದನೇ ಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ನೇಪಾಳಕ್ಕೆ ತೆರಳಲಿದ್ದಾರೆ.
ಸಭೆಯು ಆಗಸ್ಟ್ 21 ಹಾಗೂ 22ರಂದು ಕಠ್ಮಂಡುವಿನಲ್ಲಿ ನಡೆಯಲಿದೆ ಎಂದು ನೇಪಾಳದ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ.
ಸಭೆಯಲ್ಲಿ ಎರಡೂ ದೇಶದ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಯಲಿದೆ. ರಸ್ತೆ ಸಂಪರ್ಕ ಹಾಗೂ ಆರ್ಥಿಕ ಸಹಭಾಗಿತ್ವ, ವ್ಯಾಪಾರ, ಸಂಸ್ಕೃತಿ, ಶಿಕ್ಷಣ ಸೇರಿದಂತೆ ಹಲವು ವಿಷಯಗಳ ಚರ್ಚೆ ನಡೆಯಲಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.