ಜೋಹಾನ್ಸ್ಬರ್ಗ್ : ದಕ್ಷಿಣ ಆಫ್ರಿಕಾದಿಂದ ಮಹಾತ್ಮಗಾಂಧಿ ಸ್ವದೇಶಕ್ಕೆ ಮರಳಿದ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ, ಗುಜರಾತ್ ಮೂಲದ ಮೂವರು ಹಿರಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಭಾರತೀಯರಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 91 ವರ್ಷದ ಮಗನ್ ಮೊರರ್ ಪಟೇಲ್, ಗಾಂಧಿ ವಾಕ್ ಕಮಿಟಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಹೇಂದ್ರ ಮೋದಿ ಅವರಿಗೆ ಪ್ರದಾನ ಮಾಡಲಾಯಿತು.
ಅಲ್ಲದೆ, ಮೂರನೇ ಪ್ರಶಸ್ತಿಯನ್ನು ಹಿರಿಯ ಗಾಂಧಿವಾದಿ, ಮೋಹನ್ ಹಿರಾ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.