ಕೊಲಂಬೊ: ನಗದು ಕೊರತೆ ಎದುರಿಸುತ್ತಿರುವ ದ್ವೀಪ ರಾಷ್ಟ್ರವನ್ನು 2048ರ ವೇಳೆಗೆ ಅಭಿವೃದ್ಧಿಹೊಂದಿದ ದೇಶವನ್ನಾಗಿಸಲು ಎಲ್ಲಾ ಕಾರ್ಮಿಕರು ಕೈಜೋಡಿಸಬೇಕೆಂದು ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಸೋಮವಾರ ಕರೆ ನೀಡಿದ್ದಾರೆ.
‘ದೇಶವು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಲ್ಲಿ ದುಡಿಯುವ ವರ್ಗವು ಮಹತ್ವದ ಪಾತ್ರ ವಹಿಸಲಿದೆ’ ಎಂದು ಅಂತರರಾಷ್ಟ್ರೀಯ ಕಾರ್ಮಿಕ ದಿನದ ಅಂಗವಾಗಿ ನೀಡಿರುವ ಸಂದೇಶದಲ್ಲಿ ಅವರು ಹೇಳಿದ್ದಾರೆ.
‘ಎಲ್ಲಾ ಸವಾಲುಗಳನ್ನು ಎದುರಿಸಿ ದೇಶವನ್ನು ಮುನ್ನಡೆಸುವ ಶಕ್ತಿ ಕಾರ್ಮಿಕರಿಗಿದೆ’ ಎಂದೂ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.