ADVERTISEMENT

ಸೌದಿಯಲ್ಲಿ ಬಸ್ ಅಪಘಾತ: ತೆಲಂಗಾಣದ 42 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ನವೆಂಬರ್ 2025, 5:25 IST
Last Updated 17 ನವೆಂಬರ್ 2025, 5:25 IST
<div class="paragraphs"><p>ಸೌದಿಯಲ್ಲಿ ಬಸ್ ಅಪಘಾತ</p></div>

ಸೌದಿಯಲ್ಲಿ ಬಸ್ ಅಪಘಾತ

   

ಬೆಂಗಳೂರು: ಸೌದಿ ಅರೇಬಿಯಾದ ಮೆಕ್ಕಾ–ಮದೀನಾ ರಸ್ತೆಯಲ್ಲಿ ಖಾಸಗಿ ಬಸ್‌ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಬಸ್, ಟ್ಯಾಂಕರ್‌ಗೆ ಅಪ್ಪಳಿಸಿದ್ದಕ್ಕೆ ಬಸ್ ಹೊತ್ತಿ ಉರಿದಿದ್ದು 42 ಕ್ಕೂ ಹೆಚ್ಚು ಜನ ಮೃತಪಟ್ಟಿರುವುದು ವರದಿಯಾಗಿದೆ. ಮೃತರಲ್ಲಿ ಬಹುತೇಕರು ಭಾರತೀಯರು ಎನ್ನಲಾಗಿದೆ.

ADVERTISEMENT

ಮೃತರಲ್ಲಿ 20 ಮಹಿಳೆಯರು 12 ಮಕ್ಕಳು ಹಾಗೂ ಉಳಿದವರು ವಯಸ್ಕ ಪುರುಷರು ಎಂದು ತಿಳಿದು ಬಂದಿದೆ.

ಮೃತರೆಲ್ಲರೂ ತೆಲಂಗಾಣದ ಎಂದು ತಿಳಿದು ಬಂದಿದ್ದು, ಘಟನೆಗೆ ತೆಲಂಗಾಣ ಸರ್ಕಾರ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ರಿಯಾದ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಜೊತೆ ನಿರಂತರ ಸಂಪರ್ಕ ಸಾಧಿಸಿ ಸಂತ್ರಸ್ತರ ನೆರವಿಗೆ ಧಾವಿಸುವಂತೆ ತಮ್ಮ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಘಟನೆ ನಡೆದಿರುವುದನ್ನು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಸುದ್ದಿಸಂಸ್ಥೆ ಎಎನ್‌ಐಗೆ ಖಚಿತಪಡಿಸಿದ್ದು, ಮೃತದೇಹಗಳನ್ನು ಸಂಬಂಧಿಕರಿಗೆ ಆದಷ್ಟು ಬೇಗ ಹಸ್ತಾಂತರಿಸಲು ವಿದೇಶಾಂಗ ಇಲಾಖೆ ತ್ವರಿತಗತಿಯಲ್ಲಿ ಸ್ಪಂದಿಸಬೇಕುಎ ಎಂದು ಹೇಳಿದ್ದಾರೆ.

ಭಾರತದಿಂದ ಕಳೆದ ನವೆಂಬರ್ 9ರಂದು ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತಂಡ, ಮೆಕ್ಕಾದಲ್ಲಿ ಉಮ್ರಾ ಯಾತ್ರೆ ಮುಗಿಸಿಕೊಂಡು ಭಾನುವಾರ ಮೇದಿನಾಕ್ಕೆ ಖಾಸಗಿ ಬಸ್‌ನಲ್ಲಿ ತೆರಳುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಅವಘಡ ಸಂಭವಿಸಿದೆ ಎಂದು ವರದಿಗಳು ಹೇಳಿವೆ.

ಹೈದರಾಬಾದ್‌ನ ನಾಂಪಲ್ಲಿಯ ಅಲ್ ಮದೀನ ಅಲ್ ಮೀನಾ ಟ್ರಾವೆಲ್ ಏಜನ್ಸಿಯ ಮೂಲಕ ಒಂದು ತಂಡವು ಸೌದಿಗೆ ತೆರಳಿತ್ತು ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.