ಢಾಕಾ: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಯುವ್ಯ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಶನಿವಾರ ರಾತ್ರಿ ನಡೆಸಿದ ಸಂಘಟಿತ ಸರಣಿ ದಾಳಿ ಇದಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೇವಾಲಯಗಳಲ್ಲಿನ ವಿಗ್ರಹಗಳನ್ನು ರಾತ್ರೋರಾತ್ರಿ ಹಾನಿಗೊಳಿಸಲಾಗಿದ್ದು, ಕೆಲವು ವಿಗ್ರಹಗಳು ದೇಗುಲದ ಕೊಳದಲ್ಲಿ ಪತ್ತೆಯಾಗಿವೆ ಎಂದು ಠಾಕೂರ್ಗಾಂವ್ನ ಬಲಿಯದಂಗಿಯ ಹಿಂದೂ ಸಮುದಾಯದ ಮುಖಂಡ ಬಿದ್ಯನಾಥ್ ಬರ್ಮನ್ ಹೇಳಿದ್ದಾರೆ.
ಈ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು. ಮುಸ್ಲಿಂ ಬಾಂಧವರೊಂದಿಗೆ ಯಾವುದೇ ಭಿನ್ನಭಿಪ್ರಾಯ ಇರಲಿಲ್ಲ. ಅಪರಾಧಿಗಳು ಯಾರೂ ಎಂದು ತಿಳಿಯುತ್ತಿಲ್ಲ ಎಂದು ಮತ್ತೊಬ್ಬ ಹಿಂದೂ ಸಮುದಾಯದ ನಾಯಕ ಸಮರ್ ಚಟರ್ಜಿ ಹೇಳಿದ್ದಾರೆ.
ಪ್ರದೇಶದಲ್ಲಿ ಶಾಂತಿ ಕದಡುವ ಯತ್ನ ಇದಾಗಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.