ನವದೆಹಲಿ: ಭಾರತದಲ್ಲಿ ಆಶ್ರಯ ಪಡೆದಿರುವ ಮ್ಯಾನ್ಮಾರ್ನ ಪೊಲೀಸ್ ಅಧಿಕಾರಿಗಳನ್ನು ಹಸ್ತಾಂತರಿಸುವಂತೆ ಮ್ಮಾನ್ಮಾರ್ ಕೋರಿದೆ.
ಫೆಬ್ರುವರಿ 1ರ ಮಿಲಿಟರಿ ದಂಗೆಯನ್ನು ವಿರೋಧಿಸಿ ಮ್ಯಾನ್ಮಾರ್ನಲ್ಲೆಡೆ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗಳಲ್ಲಾದ ಹಿಂಸಾಚಾರದಲ್ಲಿ ಹಲವಾರು ಮಂದಿ ಮೃತಪಟ್ಟಿದ್ದಾರೆ. ಮಿಲಿಟರಿ ಆಡಳಿತದಡಿ ಕೆಲಸ ಮಾಡಲು ಇಚ್ಛಿಸದ ಸುಮಾರು 30 ಮ್ಯಾನ್ಮಾರ್ ಪೊಲೀಸರು ಮತ್ತು ಅವರ ಕುಟುಂಬದವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.
‘ಉಭಯ ರಾಷ್ಟ್ರಗಳ ನಡುವಿನ ಸ್ನೇಹ ಸಂಬಂಧವನ್ನು ಹೀಗೆ ಮುಂದುವರಿಸುವ ನಿಟ್ಟಿನಲ್ಲಿ ಭಾರತದಲ್ಲಿರುವ 8 ಪೊಲೀಸ್ ಅಧಿಕಾರಿಗಳನ್ನು ಮ್ಯಾನ್ಮಾರ್ಗೆ ಹಸ್ತಾಂತರಿಸಬೇಕು’ ಎಂದು ಮಿಜೋರಾಂನ ಚಂಪೈ ಜಿಲ್ಲೆಯ ಉಪ ಆಯುಕ್ತರಾದ ಮರಿಯಾ ಸಿ.ಟಿ ಜುವಾಲಿ ಅವರಿಗೆ ಮ್ಯಾನ್ಮಾರ್ನ ಫಾಲಂನ ಹಿರಿಯ ಅಧಿಕಾರಿಯೊಬ್ಬರು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮರಿಯಾ,‘ಈ ಕುರಿತು ಗೃಹ ಸಚಿವಾಲಯಕ್ಕೆ ತಿಳಿಸಲಾಗಿದೆ. ಗೃಹ ಸಚಿವಾಲಯ ನೀಡುವ ನಿರ್ದೇಶನದ ಮೇರೆಗೆ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.