ADVERTISEMENT

ವರ್ಷದಲ್ಲಿ ಚುನಾವಣೆ : ಮ್ಯಾನ್ಮಾರ್‌ ಸೇನೆ ಭರವಸೆ

ಏಜೆನ್ಸೀಸ್
Published 1 ಫೆಬ್ರುವರಿ 2021, 8:59 IST
Last Updated 1 ಫೆಬ್ರುವರಿ 2021, 8:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನೇಪಿಟಾ (ಮ್ಯಾನ್ಮಾರ್‌): ಒಂದು ವರ್ಷದ ತುರ್ತು ಪರಿಸ್ಥಿತಿ ಮುಕ್ತಾಯಗೊಂಡ ಬಳಿಕ ಚುನಾವಣೆವನ್ನು ನಡೆಸುವುದಾಗಿ ಮ್ಯಾನ್ಮಾರ್‌ ಸೇನೆಯು ಸೋಮವಾರ ತಿಳಿಸಿದೆ.

ಮ್ಯಾನ್ಮಾರ್‌ನಲ್ಲಿ ದಂಗೆಯೆದ್ದಿರುವ ಸೇನೆಯು ಅಧಿಕಾರವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಒಂದು ವರ್ಷದ ವರೆಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

2008ರ ಸಂವಿಧಾನದ ಪ್ರಕಾರ ಎಲ್ಲಾ ಸರ್ಕಾರಿ ಕಾರ್ಯಗಳನ್ನು ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಮೀನ್ ಆಂಗ್ ಲಾಯ್ ಅವರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಸರ್ಕಾರದ ದೂರದರ್ಶನದಲ್ಲಿ ಪ್ರಕಟಿಸಲಾಗಿದೆ.

ADVERTISEMENT

‘‌ದೇಶದಲ್ಲಿ ಚುನಾವಣೆ ನಡೆದ ಬಳಿಕ, ಗೆದ್ದವರಿಗೆ ಸೇನೆಯು ಅಧಿಕಾರ ಹಸ್ತಾಂತರ ಮಾಡಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಳೆದ ನವೆಂಬರ್‌ನಲ್ಲಿ ನಡೆದ ಸಾರ್ವತಿಕ ಚುನಾವಣೆಯಲ್ಲಿ ಆಂಗ್‌ ಸಾನ್ ಸೂಕಿ ನೇತೃತ್ವದ ರಾಷ್ಟ್ರೀಯ ಲೀಗ್‌ ಫಾರ್‌ ಡೆಮಾಕ್ರಾಟಿಕ್‌ ಪಕ್ಷವು ವಿಜಯ ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.