ಇಸ್ಲಾಮಾಬಾದ್: ‘ರಾಷ್ಟ್ರೀಯತೆಗೆ ಸಂಬಂಧಿಸಿದ ಕಾಯ್ದೆಯೊಂದನ್ನು ಬದಲಾಯಿಸಿದಾಗ ದೇಶದಲ್ಲಿ ಅರಾಜಕತೆಯಂತಹ ವಾತಾವರಣ ನಿರ್ಮಾಣವಾಗದಂತೆ ಎಚ್ಚರವಹಿಸುವುದು ಅಗತ್ಯ’ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥ ಆ್ಯಂಟೊನಿಯೊ ಗುಟೆರಸ್ ಪ್ರತಿಪಾದಿಸಿದರು.
ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿರುವ ಅವರು, ಭಾರತವು ಜಾರಿಗೆ ತಂದಿರುವ ಸಿಎಎ, ಎನ್ಆರ್ಸಿ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಈ ರೀತಿ ಉತ್ತರಿಸಿದರು.
‘ಭಾರತ ಹೊಸ ಕಾಯ್ದೆಗಳನ್ನು ಜಾರಿಗೆ ತಂದಿರುವುದು ಕಳವಳಕಾರಿ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.