ADVERTISEMENT

ಮಧ್ಯಸ್ಥಿಕೆ ವಹಿಸಲು ಸಿದ್ಧ: ನೇಪಾಳ

ಪಿಟಿಐ
Published 25 ಜನವರಿ 2020, 19:41 IST
Last Updated 25 ಜನವರಿ 2020, 19:41 IST
   

ಕಠ್ಮಂಡು: ಭಾರತದ ಮತ್ತು ಪಾಕಿಸ್ತಾನ ನಡುವಿನ ಭಿನ್ನಾಭಿಪ್ರಾಯವನ್ನು ಶಮನ ಮಾಡಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ನೇಪಾಳ ಶನಿವಾರ ತಿಳಿಸಿದೆ.

ಉಭಯ ದೇಶಗಳು ಮಾತುಕತೆ ಮೂಲಕ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳಲು ಆದ್ಯತೆ ನೀಡಬೇಕು ಎಂದು ಅದು ಸಲಹೆ ನೀಡಿದೆ.

‘ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಮಾತುಕತೆ ಉತ್ತಮ ಮಾರ್ಗವಾಗಿದೆ. ಅಗತ್ಯ ಬಿದ್ದರೆ ಮಾತುಕತೆಗೆ ನಾವು ಮಧ್ಯಸ್ಥಿಕೆ ವಹಿಸುತ್ತೇವೆ. ಆದರೆ, ಭಾರತ ಮತ್ತು ಪಾಕಿಸ್ತಾನ ನೇರ ಮಾತುಕತೆ ನಡೆಸಿದರೆ ಹೆಚ್ಚು ಉತ್ತಮ’ ಎಂದು ನೇಪಾಳ ಅಭಿಪ್ರಾಯಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.