ಬೀಜಿಂಗ್ ( ಚೀನಾ): ಎರಡೂ ರಾಷ್ಟ್ರಗಳ ನಡುವೆ ಸೇನೆ ಹಾಗೂ ರಾಜತಾಂತ್ರಿಕ ಮಾರ್ಗಗಳ ಮೂಲಕ ಮಾತುಕತೆ ನಡೆಯುತ್ತಿರುವ ಇಂತಹ ಸಮಯದಲ್ಲಿ ಯಾವುದೇ ರಾಷ್ಟ್ರವು ಪರಿಸ್ಥಿತಿಯನ್ನು ಉಲ್ಭಣಗೊಳಿಸುವ ಯಾವುದೇ ಕೆಲಸಕ್ಕೆ ಮುಂದಾಗಬಾರದು ಎಂದು ಚೀನಾ ಎಚ್ಚರಿಕೆ ನೀಡಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಲಡಾಖ್ ಭೇಟಿ ಸಮಯದಲ್ಲಿ ಚೀನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಜೋ ಲಿಜಿಯಾನ್ ಈ ಹೇಳಿಕೆ ನೀಡಿದ್ದು, ಭಾರತಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದಂತಾಗಿದೆ. ಭಾರತ ಹಾಗೂ ಚೀನಾ ಗಡಿಯ ಕುರಿತು ಎರಡೂ ರಾಷ್ಟ್ರಗಳ ಸೇನೆ ನಡುವೆ ಹೊಡೆದಾಟ, ಹಲ್ಲೆಯಂತಹ ಕೃತ್ಯಗಳು ನಡೆಯುತ್ತಿವೆ. ಇದೇ ಕಾರಣಕ್ಕಾಗಿ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.
ಈ ವಿಷಯ ಕುರಿತಂತೆ ಎರಡೂ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಮಾರ್ಗಗಳ ಮೂಲಕ ಬಿಸಿಯ ವಾತಾವರಣವನ್ನು ತಣ್ಣಗಾಗಿಸುವ ಬಗ್ಗೆ ಸಂವಹನ ಮತ್ತು ಮಾತುಕತೆ ನಡೆಸುತ್ತಿವೆ ಎಂದಿರುವ ಲಿಜಿಯಾನ್, ಈ ನಡುವೆ ಯಾವುದೇ ಕಡೆಯವರು ಉದ್ವಿಗ್ನ ಪರಿಸ್ಥಿತಿ ಉಲ್ಬಣಿಸುವ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.