ADVERTISEMENT

ಹಫೀಜ್ ಪ್ರಕರಣದ ತೀರ್ಪು ಮುಂದೂಡಿಕೆ

ಪಿಟಿಐ
Published 8 ಫೆಬ್ರುವರಿ 2020, 17:52 IST
Last Updated 8 ಫೆಬ್ರುವರಿ 2020, 17:52 IST

ಲಾಹೋರ್: ಮುಂಬೈ ದಾಳಿ ಸಂಚುಕೋರ ಹಫೀಜ್ ಸಯೀದ್‌ ವಿರುದ್ಧದ ಭಯೋತ್ಪಾದಕ ಕೃತ್ಯಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣದ ತೀರ್ಪನ್ನು ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಮುಂಗಳವಾರಕ್ಕೆ ಮುಂದೂಡಿದೆ.

ಲಾಹೋರ್ ಎಟಿಸಿ ನ್ಯಾಯಾಧೀಶ ಅರ್ಷದ್ ಹುಸೇನ್ ಭುಟ್ಟಾ ಅವರು ಪ್ರಕರಣದ ತೀರ್ಪನ್ನು ಶನಿವಾರ ಪ್ರಕಟಿಸುವುದಾಗಿ ಕಳೆದ ವಾರ ಘೋಷಿಸಿದ್ದರು.

‘ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪ ಸಂಬಂಧ ಎಲ್ಲಾ ಪ್ರಕರಣಗಳ ತೀರ್ಪನ್ನು ಒಟ್ಟಿಗೇ ಪ್ರಕಟಿಸಬೇ
ಕೆಂದು ಸಯೀದ್ ಮನವಿ ಸಲ್ಲಿಸಿದ್ದರು. ಶನಿವಾರ ಈ ಅರ್ಜಿ ವಿಚಾರಣೆ ನಡೆಸಿ, ನ್ಯಾಯಾಧೀಶರು ತೀರ್ಪು ಮುಂದೂಡಿದ್ದಾರೆ’ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.