ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರ ರದ್ದುಗೊಳಿಸಿ ಒಂದು ವರ್ಷ ಪೂರ್ಣವಾಗುತ್ತಿರುವ ಸಂದರ್ಭದಲ್ಲೇ,ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಮತ್ತು ರಕ್ಷಣಾ ಸಚಿವ ಪರ್ವೇಜ್ ಖಟಕ್ ಸೋಮವಾರ ಗಡಿ ನಿಯಂತ್ರಣಾ ರೇಖೆ (ಎಲ್ಒಸಿ) ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭೇಟಿ ವೇಳೆ ಗಡಿಯಲ್ಲಿ ಪ್ರಸ್ತುತ ಇರುವ ಸ್ಥಿತಿಯ ಬಗ್ಗೆ ಹಿರಿಯ ಸೇನಾ ಅಧಿಕಾರಿಗಳು ಅವರಿಗೆ ವಿವರಣೆ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರದ ಜನತೆ ಜೊತೆ ನಾವಿದ್ದೇವೆ: ಪ್ರಧಾನಿಯವರ ರಾಷ್ಟ್ರೀಯ ಭದ್ರತೆ ವಿಶೇಷ ಸಹಾಯಕ ಮೊಯೀದ್ ಯೂಸಫ್ ಜೊತೆಗೂಡಿ ಇಬ್ಬರು ಸಚಿವರು ಚಿರಿ ಕೋಟ್ ಸೆಕ್ಟರ್ಗೆ ಭೇಟಿ ನೀಡಿದ್ದಾರೆ. ಎಲ್ಒಸಿ ಭೇಟಿಗೂ ಮುನ್ನ ವಿಡಿಯೊ ಮೂಲಕ ಸಂದೇಶ ನೀಡಿದ್ದ ಖುರೇಷಿ, ‘ಕಾಶ್ಮೀರದ ಜನತೆಯ ಜೊತೆಗೆ ನಾವಿದ್ದೇವೆ ಎನ್ನುವ ಒಗ್ಗಟ್ಟು ಪ್ರದರ್ಶಿಸಲುರಕ್ಷಣಾ ಸಚಿವರ ಜೊತೆಗೂಡಿ ಎಲ್ಒಸಿಗೆ ಭೇಟಿ ನೀಡುತ್ತಿದ್ದೇನೆ’ ಎಂದು ಉಲ್ಲೇಖಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.