ಇಸ್ಲಾಮಾಬಾದ್: ಅಮೃತಸರದಲ್ಲಿ ಪ್ರಾರ್ಥನಾ ಮಂದಿರದ ಮೇಲೆ ಇದೇ 18 ರಂದು ನಡೆದ ಗ್ರೆನೇಡ್ ದಾಳಿಯಲ್ಲಿ ತನ್ನ ಪಾತ್ರ ಇರುವುದನ್ನು ಪಾಕಿಸ್ತಾನ ಅಲ್ಲಗಳೆದಿದೆ.
ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್, ‘ಕಣ್ಮುಚ್ಚಿಕೊಂಡು ಪಾಕಿಸ್ತಾನದ ವಿರುದ್ಧ ದೂರುವುದನ್ನು ಭಾರತ ಅಭ್ಯಾಸ ಮಾಡಿಕೊಂಡಿದೆ‘ ಎಂದು ದೂರಿದ್ದಾರೆ.
ಈ ನಡುವೆ ದಾಳಿಗೆ ಬಳಸಿರುವ ಗ್ರೆನೇಡ್ ಪಾಕಿಸ್ತಾನ ಸೇನೆ ತಯಾರಿಸುತ್ತಿರುವ ವಸ್ತುಗಳನ್ನು ಹೋಲುತ್ತದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆರೋಪಿಸಿದ್ದಾರೆ.ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.