ADVERTISEMENT

ಭಾರತದ ರಾಯಭಾರಿಗೆ ಪಾಕ್‌ ಸಮನ್ಸ್‌

ಪಿಟಿಐ
Published 21 ಮೇ 2020, 19:45 IST
Last Updated 21 ಮೇ 2020, 19:45 IST

ಇಸ್ಲಾಮಾಬಾದ್‌ : ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದ ಹಿರಿಯ ರಾಯಭಾರಿ ಅಧಿಕಾರಿಯನ್ನು ಕರೆಯಿಸಿ ಪ್ರತಿಭಟನೆ ದಾಖಲಿಸಿದೆ.

ಭಾರತದ ರಾಯಭಾರಿ ಅಧಿಕಾರಿಗೆ ಈ ವಾರದಲ್ಲಿ ಪಾಕಿಸ್ತಾನ ನೀಡಿರುವ ಮೂರನೇ ಸಮನ್ಸ್‌ ಇದಾಗಿದೆ.

ಕಳೆದ ಬುಧವಾರ ಭಾರತೀಯ ಪಡೆಗಳು ಚಿರಿಕೋಟ್‌ ವಲಯಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು, ಇದರಿಂದ 45 ವರ್ಷದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆಎಂದು ಪಾಕ್‌ ವಿದೇಶಾಂಗ ಕಚೇರಿ ತಿಳಿಸಿದೆ.

ADVERTISEMENT

‘ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಎರಡು ವಲಯಗಳಲ್ಲಿ ಪಾಕಿಸ್ತಾನ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಪಡೆ ಇದಕ್ಕೆ ಪ್ರತ್ಯತ್ತರ ನೀಡಿದೆ‘ ಎಂದು ಭಾರತೀಯ ಸೇನಾ ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.