ADVERTISEMENT

ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ದಾಳಿ: ಭಾರತದ ರಾಯಭಾರಿಗೆ ಪಾಕ್‌ ಸಮನ್ಸ್‌ 

ಪಿಟಿಐ
Published 2 ಮೇ 2020, 17:52 IST
Last Updated 2 ಮೇ 2020, 17:52 IST

ಇಸ್ಲಾಮಾಬಾದ್‌:ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನವು ಭಾರತದ ಹಿರಿಯ ರಾಯಭಾರಿ ಅಧಿಕಾರಿಯನ್ನು ಕರೆಯಿಸಿ ಪ್ರತಿಭಟನೆ ದಾಖಲಿಸಿದೆ.

ಕಳೆದ ಶುಕ್ರವಾರ ಭಾರತೀಯ ಪಡೆಗಳು ಹಾಜಿಪಿರ್ ಮತ್ತು ಸಂಖ್ ವಲಯಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು, ಇದರಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪಾಕ್‌ ವಿದೇಶಾಂಗ ಕಚೇರಿ ತಿಳಿಸಿದೆ.

‘ಪಾಕ್‌ ನಾಗರಿಕರನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸಲಾಗುತ್ತಿದೆ. ಈ ವರ್ಷ ಭಾರತ 940 ಬಾರಿ ಕದನವಿರಾಮ ಉಲ್ಲಂಘಿಸಿದೆ’ ಎಂದು ಪಾಕ್‌ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.