ADVERTISEMENT

ಉಗ್ರರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೂಚಿಸಿದ್ದ ಪಾಕ್ ಸೇನಾ ಮುಖ್ಯಸ್ಥ: ವರದಿ

ಪಿಟಿಐ
Published 18 ಸೆಪ್ಟೆಂಬರ್ 2025, 14:15 IST
Last Updated 18 ಸೆಪ್ಟೆಂಬರ್ 2025, 14:15 IST
<div class="paragraphs"><p>ಪಾಕಿಸ್ತಾನಿ ಸೇನಾ ಮುಖ್ಯಸ್ಥ ಮುನೀರ್</p></div>

ಪಾಕಿಸ್ತಾನಿ ಸೇನಾ ಮುಖ್ಯಸ್ಥ ಮುನೀರ್

   

ಪಿಟಿಐ

ಲಾಹೋರ್‌: ಭಾರತ ಸೇನೆ ನಡೆಸಿದ ‘ಆಪರೇಷನ್‌ ಸಿಂಧೂರ’ದಲ್ಲಿ ಮೃತಪಟ್ಟ ಜೈಷ್‌–ಎ–ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಸದಸ್ಯರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಬಹವಲ್ಪುರದಲ್ಲಿರುವ ಸೇನಾ ಅಧಿಕಾರಿಗಳಿಗೆ, ಸೈನಿಕರಿಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್‌ ಮುನೀರ್‌ ಅವರು ನಿರ್ದೇಶನ ನೀಡಿದ್ದರು ಎನ್ನಲಾಗಿದೆ.

ADVERTISEMENT

ಜೆಇಎಂ ಸಂಘಟನೆಯ ಕಮಾಂಡರ್‌ ಇಲಿಯಾಸ್‌ ಕಾಶ್ಮೀರಿ ಮಾತನಾಡಿರುವ ವಿಡಿಯೊವೊಂದು ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಖ್ಯೆಯಲ್ಲಿ ಹಂಚಿಕೆಯಾಗಿದೆ. ವಿಡಿಯೊದಲ್ಲಿ ಈ ಮಾಹಿತಿಯನ್ನು ಕಾಶ್ಮೀರಿ ಹಂಚಿಕೊಂಡಿದ್ದಾನೆ.

‘25 ವರ್ಷಗಳ ಬಳಿಕ ಪಾಕ್‌ ಸೇನೆ ಹಾಗೂ ಜಿಹಾದಿಗಳು ಒಂದುಗೂಡಿದ್ದೇವೆ’ ಎಂದಿರುವ ಆತನ ಮಾತುಗಳು ವಿಡಿಯೊದಲ್ಲಿದೆ. ಜೊತೆಗೆ, ‘ಆಪರೇಷನ್‌ ಸಿಂಧೂರದಲ್ಲಿ ಇದೇ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ನ ಕುಟುಂಬದ ಹತ್ತು ಸದಸ್ಯರು ಮೃತಪಟ್ಟಿದ್ದಾರೆ’ ಎಂದೂ ಆತ ಹೇಳಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.