ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲಿಯಾಸ್ ಅವರನ್ನು ನ್ಯಾಯಾಂಗ ನಿಂದನೆ ಆರೋಪದಡಿಯಲ್ಲಿ ಅವರನ್ನು ಅನರ್ಹಗೊಳಿಸಲಾಗಿದೆ.
ಮುಜಫರಾಬಾದ್ ಹೈಕೋರ್ಟ್ ಸರ್ದಾರ್ ತನ್ವೀರ್ ಇಲಿಯಾಸ್ ಅವರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸರ್ದಾರ್ ತನ್ವೀರ್ ಇಲಿಯಾಸ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ.
ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಪ್ರಾಂತೀಯ ಅಧ್ಯಕ್ಷರಾಗಿದ್ದ ಸರ್ದಾರ್ ತನ್ವೀರ್ ಇಲಿಯಾಸ್ ಅವರು ಕಳೆದ ವರ್ಷ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.