ADVERTISEMENT

ಬಡವರ ಅಳಲು, ಅಗತ್ಯಗಳನ್ನು ನಿರ್ಲಕ್ಷಿಸಬೇಡಿ: ಶ್ರೀಲಂಕಾದ ನಾಯಕರಿಗೆ ಪೋಪ್ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜುಲೈ 2022, 12:24 IST
Last Updated 10 ಜುಲೈ 2022, 12:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವ್ಯಾಟಿಕನ್‌ ಸಿಟಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಜಗತ್ತಿನಾದ್ಯಂತ ಸದ್ದು ಮಾಡುತ್ತಿವೆ.

ಇದೇ ವೇಳೆ, ಶ್ರೀಲಂಕಾ ನಾಯಕರನ್ನು ಉದ್ದೇಶಿಸಿ ಹೇಳಿಕೆ ನೀಡಿರುವ ಪೋಪ್ ಫ್ರಾನ್ಸಿಸ್, ‘ಬಡವರ ಅಳಲು ಮತ್ತು ಅಗತ್ಯಗಳನ್ನು ನಿರ್ಲಕ್ಷಿಸಬೇಡಿ’ ಎಂದು ಮನವಿ ಮಾಡಿದ್ದಾರೆ.

‘ಶ್ರೀಲಂಕಾ ದೇಶದ ಬಿಷಪ್‌ಗಳ ಪರವಾಗಿ ನಾನು ಶಾಂತಿಗಾಗಿ ಮನವಿ ಮಾಡುತ್ತೇನೆ’ ಎಂದು ಪೋಪ್‌ ಹೇಳಿದ್ದಾರೆ.

ADVERTISEMENT

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ. ರಾನಿಲ್ ವಿಕ್ರಮಸಿಂಘೆ ಅವರು ಶನಿವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಉದ್ರಿಕ್ತರ ಗುಂಪು ಅವರ ನಿವಾಸದ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದೆ.

ಇದಕ್ಕೂ ಮುನ್ನ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಅವರ ಗೃಹಕಚೇರಿಗೆ ಪ್ರತಿಭಟನಕಾರರು ನುಗ್ಗಿದ್ದು, ದಾಂಧಲೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.