ADVERTISEMENT

ರಸ್ತೆ ಬದಿಯಲ್ಲಿ ಮಾಂಸಾಹಾರ ಮಾರಾಟ ಮಾಡುವುದು ಭೂಕಬಳಿಕೆಗೆ ಸಮ: ಗುಜರಾತ್‌ ಸಚಿವ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ನವೆಂಬರ್ 2021, 6:02 IST
Last Updated 13 ನವೆಂಬರ್ 2021, 6:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗಾಂಧಿನಗರ: ರಸ್ತೆ ಬದಿಯಲ್ಲಿ ಮೊಟ್ಟೆ ಹಾಗೂ ಮಾಂಸಾಹಾರಿ ಖಾದ್ಯಗಳನ್ನು ಮಾರದಂತೆ ರಾಜ್‌ಕೋಟ್ ಮತ್ತು ವಡೋದರಾ ನಗರ ಪಾಲಿಕೆಗಳು ಮೌಖಿಕ ಆದೇಶ ಹೊರಡಿಸಿವೆ.

ಈ ಕ್ರಮವನ್ನು ಸಮರ್ಥಿಸಿಕೊಂಡಿರುವ ಗುಜರಾತ್‌ ಕಂದಾಯ ಸಚಿವ ರಾಜೇಂದ್ರ ತ್ರಿವೇದಿ, ‘ರಸ್ತೆ ಬದಿಯಲ್ಲಿ ಮಾಂಸಾಹಾರಿ ಖಾದ್ಯಗಳನ್ನು ಮಾರಾಟ ಮಾಡುವುದು ತಾತ್ಕಾಲಿಕ ಸ್ವರೂಪದ ಭೂಕಬಳಿಕೆಯ ಕೃತ್ಯ‘ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಇತರ ನಗರಗಳಲ್ಲೂ ಈ ರೀತಿಯ ಆದೇಶಗಳನ್ನು ಹೊರಡಿಸಬಹುದು ಎಂಬ ಮುನ್ಸೂಚನೆಯನ್ನೂ ಅವರು ನೀಡಿದ್ದಾರೆ.

ADVERTISEMENT

ರಸ್ತೆ ಮತ್ತು ಕಟ್ಟಡ ಸಚಿವ ಪೂರ್ಣೇಶ್ ಮೋದಿ ಸಹ ರಸ್ತೆ ಬದಿಯಲ್ಲಿ ಮಾಂಸಾಹಾರಿ ಖಾದ್ಯಗಳನ್ನು ಮಾರುವುದರ ಬಗ್ಗೆ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.