ಸಿಂಗಪುರ(ಪಿಟಿಐ): ಮಾದಕ ದ್ರವ್ಯ ಕಳ್ಳಸಾಗಣೆ ಪ್ರಕರಣದಲ್ಲಿ ದೋಷಿಗಳಾಗಿದ್ದ ಭಾರತ ಮೂಲದ ಇಬ್ಬರು ವ್ಯಕ್ತಿಗಳನ್ನು ಸಿಂಗಪುರದ ಸುಪ್ರೀಂ ಕೋರ್ಟ್ ಆರೋಪಮುಕ್ತಗೊಳಿಸಿದೆ. ಇದರಲ್ಲಿ ಒಬ್ಬ ವ್ಯಕ್ತಿಯು ಮರಣದಂಡನೆಗೆ ಗುರಿಯಾಗಿದ್ದರು.
ಮರಣದಂಡನೆಗೆ ಗುರಿಯಾಗಿದ್ದ ಭಾರತ ಮೂಲದ ರಾಜ್ ಕುಮಾರ್ ಮತ್ತು ಜೀವಾವಧಿ ಶಿಕ್ಷೆಗೆ ಒಳಪಟ್ಟಿದ್ದ ರಾಮದಾಸ್ ಪುನ್ನುಸಾಮಿ ಅವರು ತಮ್ಮ ಶಿಕ್ಷೆಯ ವಿರುದ್ಧ ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಮೆನನ್ ಅವರ ನೇತೃತ್ವದ ತ್ರಿಸದಸ್ಯ ಪೀಠವು, ಅನುಮೋದಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.