ಢಾಕಾ : ಮೀರಾಪುರ ಸಮೀಪದ ಕೊಳೆಗೇರಿಯಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಸಾವಿರಾರು ಗುಡಿಸಲುಗಳು ಭಸ್ಮವಾಗಿ ಕನಿಷ್ಠ 10 ಸಾವಿರಕ್ಕೂ ಹೆಚ್ಚು ಮಂದಿ ನಿರಾಶ್ರಿತ ರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಿನ್ ಶೀಟ್ ಅಳವಡಿಸಿದ್ದ ಗುಡಿಸಲುಗಳಿಗೆ ಬೆಂಕಿ ತಗುಲಿದ್ದು, ಹಲವು ಮಂದಿಗೆ ಸಣ್ಣಪುಟ್ಟ ಗಾಯ ಗಳಾಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪು ಕಾರ್ಖಾನೆಗಳ ಕಾರ್ಮಿಕರು ಈ ಗುಡಿಸಲುಗಳಲ್ಲಿ ವಾಸವಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.